ಬೆಂಗಳೂರು: ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಲಾಲ್ ಬಾಗ್ನ ಗಣರಾಜ್ಯೋತ್ಸವ ಫಲ ಪುಷ್ಟ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.ಮಧ್ಯಾಹ್ನ ತುಮಕೂರಿಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸುವೆ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವ ಕುರಿತು 2007 ರಲ್ಲಿಯೇ ಅಂದಿನ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂಗೆ ಒತ್ತಾಯಿಸಿದ್ದೆ. ಈಗ ಅಗತ್ಯ ಬಿದ್ದರೆ ಪ್ರಧಾನಿ ಮೋದಿ ಭೇಟಿ ಮಾಡುತ್ತೇನೆ ಎಂದರು.
ಇಂದು ಬೆಳಿಗ್ಗೆ 11 ಗಂಟೆಗೆ ನಾನಾ ಪೊಲೀಸ್ ಠಾಣೆಗಳಿಂದ ನೂರಕ್ಕಿಂತ ಹೆಚ್ಚಿನ ಸಿಬ್ಬಂದಿ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದಾರೆ. ಸಿದ್ದಗಂಗಾ ಮಠಕ್ಕೆ ಮುಧ್ಯಾಹ್ನ ಸಿ.ಎಂ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪೊಲೀಸ್ ಠಾಣೆಗಳಿಂದ ಸುಮಾರು 250 ಪೊಲೀಸ್ ಸಿಬ್ಬಂದಿಗಳನ್ನು ಮಠದಲ್ಲಿ ಬಂದೋಬಸ್ತಿಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.