ಸ್ವಾರ್ಥಕ್ಕಾಗಿ ಜೆಡಿಎಸ್-ಬಿಜೆಪಿ ಜೊತೆ ಸೇರಿದ್ದಾರೆ – ಸಿದ್ದರಾಮಯ್ಯ

ಸ್ವಾರ್ಥಕ್ಕಾಗಿ ಜೆಡಿಎಸ್-ಬಿಜೆಪಿ ಜೊತೆ ಸೇರಿದ್ದಾರೆ – ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಲೋಕಾಸಭೆ ಚುನಾವಣೆ ಕಣ ಜೋರಾಗಿದ್ದು, ಬಿಜೆಪಿ-ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಜೊತೆ ದೇವೇಗೌಡರು ಕೈ ಜೋಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಮನಮೋಹನ್ ಸಿಂಗ್ ಖಾಲಿ ಚೊಂಬು ಕೊಟ್ಟಿದ್ದರು. ನರೇಂದ್ರ ಮೋದಿ ಅದನ್ನು ಅಕ್ಷಯ ಪಾತ್ರೆ ಮಾಡಿದ್ದಾರೆ ಎಂದು ದೇವೇಗೌಡರು ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದರು. ಆದರೆ 10 ವರ್ಷದಲ್ಲಿ ಮೋದಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

ಕೋಮುವಾದಿ ಪಕ್ಷ ಎಂದ ದೇವೇಗೌಡರು ಈಗ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಮುಂದಿನ ಜನ್ಮ ಇದ್ದರೆ ಮುಸಲ್ಮಾನ ಆಗಿ ಹುಟ್ಟುತ್ತೇನೆ ಎಂದಿದ್ದರು. ಆದರೆ ಅಳಿಯನಿಗೆ ಅವರ ಪಕ್ಷದಲ್ಲಿ ಟಿಕೆಟ್‌ ನೀಡಲಿಲ್ಲ. ಬಿಜೆಪಿಯಲ್ಲಿ ತೆಗೆದುಕೊಂಡು ಹೋಗಿ ನಿಲ್ಲಿಸಿದ್ದಾರೆ. ಸ್ವಾರ್ಥಕ್ಕಾಗಿ ಬಿಜೆಪಿ ಜೊತೆ ಸೇರಿದ್ದಾರೆ ಎಂದು ಕಿಡಿಕಾರಿದರು.

 

ಫ್ರೆಶ್ ನ್ಯೂಸ್

Latest Posts

Featured Videos