ಸೌಮ್ಯಾರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ

ಸೌಮ್ಯಾರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೌಮ್ಯಾ ರೆಡ್ಡಿ ಅವರು ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಾರಿ ಜಿದ್ದಾಜಿದಿಗೆ ಕಾರಣವಾಗಿದೆ. ಸೌಮ್ಯಾ ರೆಡ್ಡಿ ಅವರ ಪರವಾಗಿ ಕಾಂಗ್ರೆಸ್‌ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಜಯನಗರ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ರೋಡ್‌ ಶೋ ಮೂಲಕ ಸೌಮ್ಯಾ ರೆಡ್ಡಿ ಪರವಾಗಿ ಮತಯಾಚಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯ ಸರಿಪಡಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುವವರನ್ನು ಆಯ್ಕೆ ಮಾಡುವುದು ಅನಿವಾರ್ಯ ಎಂದರು.

ಕಳೆದ ಅವಧಿಯಲ್ಲಿ ಬಿಜೆಪಿಯ 25 ಮಂದಿಯನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದರಿಂದ ರಾಜ್ಯಕ್ಕೆ ಯಾವುದೇ ಲಾಭವಾಗಿಲ್ಲ. ಅದರಲ್ಲೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿ ಸಂಸದ ಒಮ್ಮೆಯೂ ರಾಜ್ಯದ ಮತ್ತು ಬೆಂಗಳೂರಿನ ಪರವಾಗಿ ಸಂಸತ್ತಿನಲ್ಲಿ ಮಾತನಾಡಿಲ್ಲಾ. ಹೀಗಾಗಿ ಈ ಬಾರಿ ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಅರಿವಿರುವ, ಅದನ್ನು ನಿವಾರಿಸುವ ಗುರಿ ಹೊಂದಿರುವ ಸೌಮ್ಯಾ ರೆಡ್ಡಿ ಅವರ ಪರವಾಗಿ ಮತ ಚಲಾಯಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕೋರಿದರು.

ಸೌಮ್ಯಾ ರೆಡ್ಡಿ ಗೆದ್ದರೆ ಬೆಂಗಳೂರು ದಕ್ಷಿಣ ಮಾತ್ರವಲ್ಲದೆ ಇಡೀ ಬೆಂಗಳೂರಿನ ಸಮಸ್ಯೆಗಳು ನಿವಾರಣೆಯಾಗಲಿದೆ. ಜೊತೆಗೆ ಬೆಂಗಳೂರು ಅಭಿವೃದ್ಧಿಪಥದತ್ತ ಸಾಗಲಿದೆ ಎಂದು ಸಿಎಂ ಘೋಷಿಸಿದರು.

ಜಯನಗರ ಕ್ಷೇತ್ರದ ಶಾಸಕಿಯಾಗಿದ್ದಾಗ ಸೌಮ್ಯಾ ರೆಡ್ಡಿ ಜನರ ಸಮಸ್ಯೆಗಳನ್ನು ಅರಿತು ಕೆಲಸ ಮಾಡಿದವರು. ಸರ್ಕಾರಿ ಶಾಲೆ ನಿರ್ಮಾಣ ಸೇರಿದಂತೆ ಅವರು ಮಾಡಿದ ಕೆಲಸಗಳನ್ನು ಜನರು ಈಗಲೂ ಸ್ಮರಿಸುತ್ತಾರೆ. ಆದರೆ, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹಾಲಿ ಸಂಸದರು ಮಾಡಿದ ಮೋಸದಿಂದಾಗಿ ಕೆಲವೇ ಮತಗಳ ಅಂತರಿಂದ ಸೋಲುವಂತಾಗಿದೆ. ಆ ಸೋಲಿನ ನೋವನ್ನು ಲೋಕಸಭಾ ಚುನಾವಣೆಯಲ್ಲಿ ಮತದಾರರು ಮರೆಸಬೇಕು. ಹೆಣ್ಣು ಮಗುವಿಗೆ ಆದಂತಹ ಅನ್ಯಾಯವನ್ನು ಕ್ಷೇತ್ರದ ಮತದಾರರು ಸರಿಪಡಿಸಬೇಕು ಎಂದರು . ಶಾಸಕ ಕೃಷ್ಣಪ್ಪ, ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸೇರಿದಂತೆ ಇತರರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos