ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಅದರಲ್ಲೂ ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಸ್ಪರ್ಧಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲಕ್ಷ್ಮಣ್ ಒಬ್ಬ ಸಭ್ಯ , ವಿದ್ಯಾವಂತ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವ ವ್ಯಕ್ತಿ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವಂತ ವ್ಯಕ್ತಿಗೆ ಮತ ಹಾಕಬೇಕು. ಹೀಗಾಗಿ ಎಂ.ಲಕ್ಷ್ಮಣ್ ಗೆ ಮತ ಹಾಕಿ ಗೆಲ್ಲಿಸಿ ಎಂದು ಮನವಿ ಮಾಡಿದರು.
ಬಿಜೆಪಿ ಅಂದರೆ ಲೂಟಿ ಕೋರರು, ಸುಳ್ಳುಕೋರರು. ರಾಜ್ಯದಲ್ಲಿರುವ ಬಿಜೆಪಿ ನಾಯಕರು ರಾಜ್ಯದ ಜನರಿಗೆ ಮೋಸ ಮಾಡುತ್ತಿದ್ದಾರೆ. ಇವರಿಗೆ ವೋಟ್ ಕೊಡಬೇಕಾ.? ಕೊಡಬಾರದು. ಕಳೆದ ಚುನಾವಣೆಯಲ್ಲಿ 25 ಜನ ಸಂಸದರನ್ನ ಗೆಲ್ಲಿಸಿ ಕೊಟ್ಟರಲ್ಲ. ಇಲ್ಲಿ ಅವನ್ಯಾರೋ ಗೆಲ್ಲಿಸಿ ಕೊಟ್ಟಿದ್ದೀರಲ್ಲ ಎಂತ ಸಿಂಹ ಅವನು. ಪ್ರತಾಪ್ ಸಿಂಹ ನಾವು ಮಾಡಿದ ಕೆಲಸಗಳನ್ನು ನಾನು ಮಾಡಿದ್ದು ಅಂತ ಹೇಳಿಕೊಂಡು ಓಡಾಡುತ್ತಿದ್ದಾನೆ. ಪ್ರತಾಪ ಸಿಂಹ ಅಲ್ಲ ಬರಿ ಪ್ರಲಾಪ ಸಿಂಹ ಅವನು ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.