ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಆರ್.ವಿ.ದೇಶಪಾಂಡೆ

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಆರ್.ವಿ.ದೇಶಪಾಂಡೆ

ಹುಬ್ಬಳ್ಳಿ, ಮೇ. 8, ನ್ಯೂಸ್ ಎಕ್ಸ್ ಪ್ರೆಸ್: ಸಿದ್ದರಾಮಯ್ಯ ಮಾಡಿದ್ದ ಅಭಿವೃದ್ಧಿ ಕೆಲಸಗಳನ್ನು ನೋಡಿದರೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಬೇಕಿತ್ತು. ಈ ಅವಧಿಗೆ ಜೆಡಿಎಸ್ ಮುಖ್ಯಮಂತ್ರಿ ಇರಬೇಕು ಎಂದು ಒಪ್ಪಂದವಾಗಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ಚುನಾವಣೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆಗಬೇಕು. ಅವರು ಮುಂದಿನ ಸಿಎಂ ಅಗಬೇಕು ಎನ್ನುವುದು ನಮ್ಮ ಆಕಾಂಕ್ಷೆ ಎಂದರು.

ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟು ಕಾಂಗ್ರೆಸ್ ತಪ್ಪು ಮಾಡಿದೆ ಎಂಬ ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಅವರ ಹೇಳಿಕೆಗೆ ಸಚಿವ ಆರ್.ವಿ.ದೇಶಪಾಂಡೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೇಶಪಾಂಡೆ, ಬಸವರಾಜ್ ಹೊರಟ್ಟಿಯವರು ಇನ್ನೊಂದು ಪಕ್ಷದ ವ್ಯವಹಾರದಲ್ಲಿ ಕೈ ಹಾಕಬಾರದು. ಯಾರನ್ನೂ ಸಚಿವರನ್ನಾಗಿ ಮಾಡಬೇಕು ಎನ್ನುವುದು ಆಯಾ ಪಕ್ಷಕ್ಕೆ ಬಿಟ್ಟಿದ್ದು, ಜೆಡಿಎಸ್ ವ್ಯವಹಾರದಲ್ಲಿ ನಾವು ಮೂಗು ತೂರಿಸಿದರೆ ಸರಿ ಇರುತ್ತಾ ಎಂದು ಟಾಂಗ್ ಕೊಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos