ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೆ ಸಂಕಷ್ಟ..!

ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೆ ಸಂಕಷ್ಟ..!

ಬೆಂಗಳೂರು: ಕಾಂಗ್ರೆಸ್ ಸರ್ಕಾರ 2023ನೇ ವಿಧಾನಸಭಾ ಚುನಾವಣೆಯಲ್ಲಿ 17 ಗ್ಯಾರಂಟಿಗಳ ಭರವಸೆಯನ್ನು ನೀಡಿತ್ತು. ಈ ಸಂಬಂಧ ಪ್ರಮುಖ ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ನಿಟ್ಟಿನಲ್ಲಿ ಇನ್ನುಳಿದ ಗ್ಯಾರಂಟಿಗಳ ಪೈಕಿ ಆರನೇ ಗ್ಯಾರೆಂಟಿ ಅಂಗನವಾಡಿ ಕಾರ್ಯಕರ್ತರಿಗೆ ನೀಡಿದ್ದ, ಭರವಸೆ ಈಗ ಅದು ಹುಸಿಯಾಗಿ ಅಂಗನವಾಡಿ ಕೇಂದ್ರಗಳಿಗೆ ಪರ್ಯಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಸೂಚಿಸಿದ್ದಾರೆ. ಅಂಗನವಾಡಿ ಕೇಂದ್ರಗಳು ಅಳಿವಿನಂಚಿಗೆ ತಲುಪಲಿವೆ. ಹೀಗಾಗಿ ಸೆಪ್ಟೆಂಬರ್ 15ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಮುಂದಾಗಿದ್ದಾರೆ.

ನೂತನ ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ ಒಟ್ಟು 17 ಭರವಸೆಗಳ ಮಹಾಪೂರವನ್ನೇ ನೀಡಿತ್ತು ಈ ಪೈಕಿ ಮತ್ತೊಂದು ಅಂಗನವಾಡಿಯ ಭರವಸೆ ನೀಡಿತ್ತು. ಅದನ್ನು ತಕ್ಷಣ ಜಾರಿಗೆ ತರುವಂತೆ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ. ಇನ್ನು ನಿನ್ನೆ ತಾನೆ ಬೆಂಗಳೂರು ಬಂದ್ ಹೋರಾಟದ ಒತ್ತಡ ಮುಕ್ತಾಯದ ಬೆನ್ನಲ್ಲೇ ಇದರಿಂದ 6ನೇ ಗ್ಯಾರಂಟಿಯ ಭರವಸೆ ಸರ್ಕಾರಕ್ಕೆ ಎದುರಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos