ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ `ಮೈತ್ರಿ ಅಭ್ಯರ್ಥಿ’ಗಳ ಗೆಲುವು: ಮಾಜಿ ಸಿಎಂ ಸಿದ್ದರಾಮಯ್ಯ

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ `ಮೈತ್ರಿ ಅಭ್ಯರ್ಥಿ’ಗಳ ಗೆಲುವು: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು , ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳ ಜೊತೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ 28 ಕ್ಷೇತ್ರಗಳಲ್ಲಿ 7 ಕಡೆ ಜೆಡಿಎಸ್ ಅಭ್ಯರ್ಥಿಗಳು 21 ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸದಾನಂದ ಗೌಡ ಈ ಕ್ಷೇತ್ರದಿಂದ 5 ವರ್ಷಗಳ ಕಾಲ ಸಂಸದರಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಅರೋಪಿಸಿದರು.

ಅನಂತ್ ಕುಮಾರ್ ನಿಧನರಾದಾಗ ಅವರ ಪತ್ನಿ ತೇಜಸ್ವಿನಿ ಬೆಂಗಳೂರು ದಕ್ಷಿಣ ಟಿಕೆಟ್ ಕೊಡೊ ಭರವಸೆ ನೀಡಿದ್ದರು. ಆದರೆ ಈ ಯಾರೋ ಯುವಕನಿಗೆ ಟಿಕೆಟ್ ಕೊಟ್ಟಿದ್ದಾರೆ. ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದ್ದರಿಂದ ನಾವು ಮಾಡಿಕೊಳ್ಳಬೇಕು ಎಂದಿಲ್ಲ. ಆದರೆ ಅನಂತ್ ಕುಮಾರ್ ಅವರ ಬೆಂಬಲಿಗರಿಗೆ ಬೇಸರ ಆಗಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos