ಮಂಗಳೂರು/ಚಿಕ್ಕಮಗಳೂರು, ಜು. 31 : ಕಾಫಿ ಡೇ ಸಂಸ್ಥಾಪಕ, ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರ ಅಳಿಯ ವಿಜಿ ಸಿದ್ದಾರ್ಥ ಮೃತದೇಹ ಇಂದು ಬೆಳಗ್ಗೆ ಮಂಗಳೂರಿನ ಹೊಯ್ಗೆ ಬಜಾರ್ ತೀರದಲ್ಲಿ ಪತ್ತೆಯಾಗಿತ್ತು. ಸಿದ್ದಾರ್ಥ ಹುಟ್ಟೂರು ಚಿಕ್ಕಮಗಳೂರಿನಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಸಂಜೆ 6.30ರ ನಂತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.