ಸಿದ್ದು ಆಸ್ಪತ್ರೆಗೆ ದಾಖಲು

ಸಿದ್ದು ಆಸ್ಪತ್ರೆಗೆ ದಾಖಲು

ಬೆಂಗಳೂರು, ಡಿ. 11 : ಉಪಚುನಾವಣೆಯಲ್ಲಿ ಪಕ್ಷ ಹೀನಾಯವಾಗಿ ಸೋತಿದ್ದಕ್ಕೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ತಮ್ಮ ಸಿಎಲ್ಪಿ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ಸಿದ್ದರಾಮಯ್ಯಗೆ ಕಾಣಿಸಿಕೊಂಡ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕ ರಕ್ತದೊತ್ತಡವಾದ ಹಿನ್ನೆಲೆ ಕೂಡಲೇ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಕರೆದೊಯ್ದ ಕುಟುಂಬಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಿದ್ದು ಅಸ್ವಸ್ಥರಾಗ್ತಿದ್ದಂತೆ ನಿವಾಸ ಕಾವೇರಿಯಲ್ಲಿ ಅತಂಕ ಮೂಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು,
ಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತೀಚಿಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಈ ಕಾರಣಕ್ಕೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos