ಸಿದ್ದು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ!

ಸಿದ್ದು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ!

ಮೈಸೂರು, ಸೆ. 4: ಇಂದು ಮೈಸೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು, ಬೆಳಗ್ಗೆ 9 ಗಂಟೆಗೆ ಎಚ್ಎಎಲ್ ವಿಶೇಷ ವಿಮಾನ ನಿಲ್ದಾಣದ ಮೂಲಕ ಮೈಸೂರಿಗೆ ತೆರಳಿದ್ದರು. ಈ ವೇಳೆ ಅವರು ಮಾಧ್ಯಮದ ಜೊತೆ ಮೈಸೂರಿನಲ್ಲಿ ಮಾತನಾಡಿದ್ದಾರೆ. ನಂತರ ಕಾರ್ಯಕರ್ತನ ಕೆನ್ನೆಗೆ ಸಿದ್ದು ಬಾರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬುವವರು ಯಾವುದೋ ವ್ಯಕ್ತಿಗೆ ಕರೆ ಮಾಡಿದ್ದರು. ಅದಾದ ನಂತರ ಹತ್ತಿರ ಬಂದ ಸಿದ್ದರಾಮಯ್ಯ ಅವರಿಗೆ ಮೊಬೈಲ್ ನೀಡಲು ರವಿ ಮುಂದಾಗಿದ್ದರು. ಅಷ್ಟೇ ಅಲ್ಲ, ದೂರವಾಣಿ ಸಂಪಕರ್ಕದಲ್ಲಿರುವವರ ಜೊತೆ ಮಾತನಾಡುವಂತೆ ಕೋರಿದ್ದರು. ‘ನಾನು ಮಾತಾನಡುವುದಿಲ್ಲ ಹೋಗ್’ ಎಂದು ಸಿದ್ದರಾಮಯ್ಯ ರವಿ ಕೆನ್ನೆಗೆ ಬಾರಿಸಿ, ಬದಿಗೆ ತಳ್ಳಿದ್ದಾರೆ. ಅಷ್ಟಕ್ಕೂ ರವಿ ಮೊಬೈಲ್ನಲ್ಲಿ ಯಾರ ಜೊತೆ ಮಾತನಾಡುತ್ತಿದ್ದರು, ಸಿದ್ದರಾಮಯ್ಯ ಮಾತನಾಡಲು ನಿರಾಕರಿಸಿದ್ದೇಕೆ ಎನ್ನುವುದು ಇನ್ನೂ ಗುಟ್ಟಾಗಿಯೇ ಉಳಿದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos