ಸಿದ್ದು ಇಂದಿನಿಂದ 4 ದಿನ ಬಾಗಲಕೋಟೆ ಪ್ರವಾಸ

ಸಿದ್ದು ಇಂದಿನಿಂದ 4 ದಿನ ಬಾಗಲಕೋಟೆ ಪ್ರವಾಸ

ಬೆಂಗಳೂರು, ಜೂ. 27: ಇಂದಿನಿಂದ 4 ದಿನ ಬಾಗಲಕೋಟೆ ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ ನವರು ಇಂದು ಸ್ವಕ್ಷೇತ್ರ ಬಾದಾಮಿಯಲ್ಲಿ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಲಿರುವ ಅವರು, ತಾಲೂಕು ಮಟ್ಟದ ಪರಿಶೀಲನೆ ಮಾಡಿ ಬಾದಾಮಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಜೂ. 29 ರಂದು ಆಲಮಟ್ಟಿಯಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಸಭೆ ಹಾಗೂ ಗುಳೆದಗುಡ್ಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜೂ. 30 ರಂದು ಬಾಗಲಕೋಟೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos