ಬೆಂಗಳೂರು, ಜು. 31: ಮಲೆನಾಡಿನ ಕಾಫಿ ಘಮವನ್ನು ಪ್ರಪಂಚದ ತುಂಬೆಲ್ಲಾ ಪಸರಿಸಿದ್ದ ವಿ.ಜಿ. ಸಿದ್ದಾರ್ಥ ಹೆಗ್ಡೆ ದುರಂತ ಅಂತ್ಯ ಕಂಡಿದ್ದಾರೆ. ಕಾಫಿ ಡೇ ಮಾಲೀಕ ಸಿದ್ದಾರ್ಥ ಸಾವಿನ ಸುದ್ದಿ ರಾಜ್ಯಸಭೆಯಲ್ಲೂ ಸದ್ದು ಮಾಡಿದ್ದು, ತೆರಿಗೆ ಭಯೋತ್ಪಾದನೆಗೆ ಸಿದ್ದಾರ್ಥ ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ದೇಶದಲ್ಲಿ ತೆರಿಗೆ ಭಯೋತ್ಪಾದನೆ ನಡೆಯುತ್ತಿದೆ, ಉದ್ಯಮಿಗಳನ್ನು ಆದಾಯ ತೆರಿಗೆ ಇಲಾಖೆ ಪೀಡಿಸುತ್ತಿದೆ. ಅದರ ಪರಿಣಾಮವಾಗಿ ಸಿದ್ದಾರ್ಥ ಸಾವನ್ನಪ್ಪಿದ್ದಾರೆ ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.