ಸಿದ್ದ ಇಂದು ರಾಹುಲ್ ಗಾಂಧಿ ಭೇಟಿ

ಸಿದ್ದ ಇಂದು ರಾಹುಲ್ ಗಾಂಧಿ ಭೇಟಿ

ನವದೆಹಲಿ, ಜೂ. 18: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ದೂರು ಕೊಟ್ಟ ಬೆನ್ನಲ್ಲೇ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಆಗುತ್ತಿದ್ದಾರೆ.

ಸೋಮವಾರ ಸಂಜೆ ದೆಹಲಿಗೆ ದಿಢೀರ್ ತೆರಳಿದ ಸಿದ್ದರಾಮಯ್ಯ ಅವರು ಇಂದು ರಾಹುಲ್ ಗಾಂಧಿ ಅವರನ್ನು ಭೇಟಿ ಆಗಲಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಪಕ್ಷದ ವರಿಷ್ಠರಾದ ಅಹ್ಮದ್ ಪಟೇಲ್, ಗುಲಾಂನಭೀ ಆಜಾದ್, ಎ.ಕೆ. ಆಂಟನಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷ ಜೆಡಿಎಸ್ ವಿರುದ್ಧ ಮೇಲುಗೈ ಸಾಧಿಸಲೇಬೇಕು. ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ರಾಜಕಾರಣದ ದೃಷ್ಟಿಯಿಂದ ಮೈತ್ರಿ ಅನಿವಾರ್ಯ ಎಂಬ ಸಂಗತಿಯನ್ನು ಜೆಡಿಎಸ್ ನಾಯಕರು ದುರಪಯೋಗಪಡಿಸಿಕೊಳ್ಳಲು ಬಿಡಬಾರದು ಎಂದು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರ ಗಮನಕ್ಕೆ ತರಲಿದ್ದಾರೆ ಎಂದು ಹೇಳಲಾಗುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos