ಮಂಡ್ಯ, ಸೆ. 26 : ‘’ನನ್ನನ್ನು ಟೀಕೆ ಮಾಡುವವರಿಗೆ ಯೋಗ್ಯತೆ ಇದೆಯೇ ಎಂದು ಪ್ರಶ್ನಿಸು ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಅಗ್ರಹಾರ ಬಾಚಹಳ್ಳಿಯಲ್ಲಿ ವಿಧಿವಶರಾದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ವೆಂಕಟಸುಬ್ಬೇಗೌಡರ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಿದ್ದರಾಮಯ್ಯನವರು ಮಾಡಿದ ಸಾಲಮನ್ನಾ ಚೆನ್ನಾಗಿದೆಯಂತೆ. ನಾನು ಮಾಡಿದ ಸಾಲಮನ್ನಾ ಸರಿ ಇಲ್ಲವಂತೆ ಎಂದು ವ್ಯಂಗ್ಯವಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯನವರಿಗೆ ನಾನೇನು ವಿಶ್ವಾಸದ್ರೋಹ ಮಾಡಿಲ್ಲ. ಅದನ್ನು ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.