ರಾಮನಗರ, ಸೆ. 24 : 14 ತಿಂಗಳ ದೋಸ್ತಿ ಸರ್ಕಾರ ಪತನ ಪ್ರಭಾವಿ ನಾಯಕರು ಒಬ್ಬರಿಗೊಬ್ಬರು ತೀರುಗೇಟು ನೀಡುತ್ತಿದ್ದಾರೆ. ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ? ಎಂದು ಕಾಂಗ್ರೆಸ್ ಶಾಸಕಾಂಗ ಪುಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಅವರ ಟ್ವೀಟ್ ಗೆ ಗರಂ ಆಗಿರುವ ಎಚ್.ಡಿ. ಕುಮಾರಸ್ವಾಮಿ ‘ನಾನು ಸಿದ್ದರಾಮಯ್ಯ ಸಾಕಿರುವ ಗಿಣಿ ಅಲ್ಲ. ರಾಮನಗರ ಜಿಲ್ಲೆಯ ಜನ ನನ್ನನ್ನ ಬೆಳೆಸಿದ್ದಾರೆ. ಎಂದು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರಿಂದ ನಾನೇನು ಬೆಳೆದಿಲ್ಲ.
ದೇವೇಗೌಡರು ಸಿದ್ದರಾಮಯ್ಯ ನವರಂತಹ ಸಾಕಷ್ಟು ಗಿಣಿಗಳನ್ನ ಬೆಳೆಸಿದ್ದಾರೆ. ಆದರೆ ಅವುಗಳೇ ಹೇಗೆ ಕುಕ್ಕಿದ್ದಾವೆಂದು ನನಗೆ ಗೊತ್ತಿದೆ. ನಾನು ಸಿದ್ದರಾಮಯ್ಯ ರಿಂದ ಸಿಎಂ ಆಗಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಸಿಎಂ ಆಗಿದ್ದೆ. ಅದನ್ನ ಸಿದ್ದರಾಮಯ್ಯ ನವರು ಸಹಿಸಲಿಲ್ಲ. ಹಾಗಾಗಿ ಈ ಸರ್ಕಾರವನ್ನ ಕೆಡವಲು ಅವರೇ ಮುಂದಾದರು. ನಾವಾದರೂ ರಾಜ್ಯದಲ್ಲಿ ಒಂದು ಪ್ರಾದೇಶಿಕ ಪಕ್ಷವನ್ನ ಕಟ್ಟಿ ಬೆಳೆಸಿದ್ದೇವೆ.