ಬೆಂಗಳೂರು, ಜು. 6 : ಆರೋಗ್ಯ ಸಚಿವ ಶ್ರೀರಾಮುಲು ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಟ್ವೀಟ್ನಲ್ಲಿ ಸಿದ್ದರಾಮಯ್ಯನವರೇ, ನಾಡು ಸಂಕಷ್ಟದಲ್ಲಿದೆ. ಜನರು ಸಮಸ್ಯೆಯಲ್ಲಿದ್ದಾರೆ. ಕೊರೊನಾವನ್ನು ಗೆಲ್ಲಬೇಕಿದೆ. ಇದು ಕೆಲಸ ಮಾಡುವ ಸಮಯ. ನಾಡಿನ ಜನತೆಗೆ ಕೆಲಸ ಮಾಡಿ, ಕೆಲಸ ಮಾಡಲು ಬಿಡಿ ಎಂದು ಹರಿಹಾಯ್ದಿದ್ದಾರೆ.
ಪ್ರಧಾನಿ ಮೋದಿ, ಸಿಎಂ ಬಿಎಸ್ ವೈ, ಸರ್ಕಾರಗಳ ಮೇಲೆ ಆರೋಪ ಮಾಡುವುದಕ್ಕೂ ಮುನ್ನ, ತಾವು ಕಾಶ್ಮೀರದಿಂದ- ಕನ್ಯಾಕುಮಾರಿಯವರೆಗೂ ಆರೋಪ ಮಾಡಿ ಆರೋಪಿಗಳಾಗಿರುವ ನಿಮ್ಮ ಪಕ್ಷದ ರಾಜ-ಮಹಾರಾಜರ ಬಗ್ಗೆ ಗಮನಹರಿಸುವುದು ಒಳಿತಲ್ಲವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.