ಬೆಂಗಳೂರು, ನ. 4 : ಕಾಂಗ್ರೆಸ್ ಪಕ್ಷದ ಪ್ರಭಾವಿ, ವಿರುದ್ಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಿಎಂ ಬಿಎಸ್ ವೈ ಸವಾಲ್ ಹಾಕಿದ್ದಾರೆ. ಸಿದ್ದರಾಮಯ್ಯ ನವರಿಗೆ ನಿಜಕ್ಕೂ ತಾಕತ್ತಿದ್ದರೆ ಉಪಚುನಾವಣೆ ಎದುರಿಸಿ ಗೆದ್ದು ತೋರಿಸಲಿ ಎಂದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯರೇ ಕಾರಣ. ಧರ್ಮಸ್ಥಳದ ಶಾಂತಿವನದದಲ್ಲಿ ಮೈತ್ರಿ ಸರ್ಕಾರ ಪತನಗೊಳಿಸುವ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧ ಇಲ್ಲ. ಅವರು ಯಾವ ಪಕ್ಷ ಸೇರುತ್ತಾರೆ ಎಂಬುದು ಗೊತ್ತಿಲ್ಲ. ಉಪಚುನಾವಣೆಗೆ ಅವರ ಸ್ಪರ್ಧೆ ಬಗ್ಗೆಯೂ ತಮಗೆ ತಿಳಿದಿಲ್ಲ ಎಂದರು.