ಬೆಂಗಳೂರು,ಜ. 27 : ನಗರದ ರಸ್ತೆಯಲ್ಲಿ ಬೆಳ್ಳಂಬೆಳಗೆ ಮಚ್ಚು ಇಟ್ಕೊಂಡು ಕಿಡಿಗೇಡಿಗಳು ಓಡಾಡ್ತಾರೆ. ಅಲ್ಲದೆ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಮಚ್ಚು ಝಳಪಿಸಿ ದುಡ್ಡು ಕಿತ್ತುಕೊಳ್ಳುತ್ತಾರೆ. ದೊಮ್ಮಲೂರಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್ಗೆ ಬೆಳಗ್ಗಿನ ಜಾವ 4.30ರ ವೇಳೆಗೆ ಮಚ್ಚಿನಲ್ಲಿ ಒಬ್ಬ ವ್ಯಕ್ತಿ ಅಟ್ಯಾಕ್ ಮಾಡಲು ಮುಂದಾದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಸ್ವಿಗ್ಗಿ ಡೆಲಿವರಿ ಮಾಡುವ ಯುವಕನ ಬೈಕನ್ನು ಅಡ್ಡಗಟ್ಟಿ ಮಚ್ಚು ಝಳಪಿಸಿ ದುಡ್ಡು ಕಿತ್ತುಕೊಂಡಿದ್ದಾನೆ. ಈ ಬೆಚ್ಚಿಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮಿಡ್ ನೈಟ್ ಕೂಡ ಈ ರೀತಿ ಘಟನೆಗಳು ನಡೆಯುತ್ತಿದ್ದವು. ಆದರೆ ಇದೀಗ ಬೆಳಗ್ಗಿನ ಜಾವ ಈ ರೀತಿ ಘಟನೆ ನಡೆಯುತ್ತಿರೋದು ಆತಂಕ ಸೃಷ್ಟಿಸಿದೆ. ನಗರಗಳಲ್ಲಿ ಪದೇ ಪದೇ ಈ ರೀತಿಯ ಘಟನೆ ನಡೆಯುತ್ತಿರೋದು ನೋಡಿದ್ರೇ ಎಷ್ಟರಮಟ್ಟಿಗೆ ಪೊಲೀಸ್ ಭದ್ರತೆ ಒದಗಿಸುತ್ತಿದ್ದಾರೆ ಎನ್ನುವ ಪ್ರಶ್ನೆಯೂ ಮೂಡಿದೆ.