ಸಿಲಿಕಾನ್ ಸಿಟಿಯಲ್ಲಿ ರೌಡಿ ಕೊಲೆ

ಸಿಲಿಕಾನ್ ಸಿಟಿಯಲ್ಲಿ ರೌಡಿ ಕೊಲೆ

ಬೆಂಗಳೂರು, ಅ. 25 : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಾರಕಾಸ್ತ್ರಗಳು ಜಳಪಿಸಿದ್ದು, ದುಷ್ಕರ್ಮಿಗಳು ಹಾಡಹಗಲೇ ರೌಡಿಯೊಬ್ಬನನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಫಿನಿಕ್ಸ್ ಮಾಲ್ ಎದುರು  ದುಷ್ಕರ್ಮಿಗಳು ರೌಡಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕಾಡಬೀಸನಹಳ್ಳಿಯ ನಿವಾಸಿ ಮಂಜುನಾಥ್ ಅಲಿಯಾಸ್ ಮಂಜು (28) ಕೊಲೆಯಾಗಿರುವ ರೌಡಿ.

ಮಾರತ್ತಹಳ್ಳಿ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಪಿನಿಕ್ಸ್ ಮಾಲ್ ಎದುರು ಮೂವರು ದುಷ್ಕರ್ಮಿಗಳು ರೌಡಿ ಮಂಜು ಮೇಲೆ ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.  ಮಹದೇವಪುರ ಠಾಣೆ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos