ನವದೆಹಲಿ, ಜು. 16 : ಭಾರತೀಯ ಜನತಾ ಪಾರ್ಟಿ ನಾಯಕ ವಿಜೇಂದರ್ ಗುಪ್ತಾ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಮಂಗಳವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ರಿಗೆ ಜಾಮೀನು ನೀಡಿದೆ.
ತಮ್ಮನ್ನು ಹತ್ಯೆ ಮಾಡಲು ಯತ್ನಿಸಿದ್ದರು ಎಂದು ತಮ್ಮ ಮೇಲೆ ಅರವಿಂದ್ ಕೇಜ್ರಿವಾಲ್ ಆರೋಪ ಮಾಡುವ ಮೂಲಕ ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯನ್ನುಂಟುಮಾಡಿದ್ದಾರೆ ಎಂದು ಗುಪ್ತ ಆರೋಪಿಸಿದ್ದರು.
ವಾದ-ವಿವಾದ ಆಲಿಸಿದ ದೆಹಲಿಯ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ 10 ಸಾವಿರ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿ ಮೇಲೆ ಮುಖ್ಯಮಂತ್ರಿಗಳಿಗೆ ಜಾಮೀನು ಮಂಜೂರು ಮಾಡಿದರು.