ಬಳ್ಳಾರಿ, ನ. 28 : ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. “ಅವನಿಗೆ ಜ್ಞಾನವಿಲ್ಲ, ನಾನು ಪಕ್ಷಾಂತರ ಮಾಡಿಲ್ಲ. ಅವನಿಗೆ ಅದು ಅರ್ಥವಾಗುತ್ತಿಲ್ಲ,” ಎಂದು ಅವರು ಹರಿಹಾಯ್ದಿದ್ದಾರೆ.
ವಿಜಯ ನಗರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿ, “ನನ್ನನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿದರು. ಆಗ ಸೋನಿಯಾ ಗಾಂಧಿ ಪಕ್ಷಕ್ಕೆ ಬರುವಂತೆ ಆಹ್ವಾನಿಸಿದರು. ನಾನಾಗಿ ಜೆಡಿಎಸ್ ಪಕ್ಷ ಬಿಡಲಿಲ್ಲ. ನಾನು ಕೋಟಿಗೆ ಮಾರಾಟವಾಗಿಲ್ಲ,” ಎಂದು ಸ್ಪಷ್ಟಪಡಿಸಿದರು.