ದಾವಣಗೆರೆ, ಜ. 14 : ಶಂಕಿಸಲಾದ ಅಸ್ಥಿಪಂಜರ ಸಿಕ್ಕಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ನಗರದ ಶಿವಮೊಗ್ಗ ರಸ್ತೆಯ ಶ್ರೀ ಹರಿಹರರೇಶ್ವರ ಲೇಔಟ್ ಹಿಂಭಾಗದಲ್ಲಿನ ಹೊಸ ಲೇಔಟ್ ನಲ್ಲಿ ಕೆಲಸಗಾರರು ಯುಜಿಡಿ ಛೇಂಬರ್ ಸಂಪರ್ಕ ಕಲ್ಪಿಸಲು ಮುಂಜಾನೆ ಛೇಂಬರ್ನ ಮುಚ್ಚಳ ತೆರೆದಾಗ ಅಸ್ಥಿಪಂಜರ ಇರುವುದನ್ನು ನೋಡಿ ಭಯಗೊಂಡು ಕೂಡಲೇ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.