ಹಾಸನ, ನ. 5 : ಕುಡಿದ ಅಮಲಿನಲ್ಲಿ ತಂದೆಯೊಬ್ಬ ಮಗಳ ಮೇಲೆ ಸುತ್ತಿಗೆಯಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಚಂಪಕನಗರದಲ್ಲಿ ನಡೆದಿದೆ.
ಪ್ರಶಾಂತ್ ಎಂಬಾತ ಈ ಕೃತ್ಯ ಎಸಗಿರುವುದು. ಸುತ್ತಿಗೆ ಹಿಡಿದು “ನಾನು ಮಯೂರ, ನಾನಿರುವುದೇ ನಿಮಗಾಗಿ, ಕೆ.ಜಿ.ಎಫ್ ಸಿನಿಮಾ ನೋಡಿದ್ದೀರಾ,” ಎಂದು ಹೇಳುತ್ತಾ ಮಗಳ ಕೈ ಮೇಲೆ ಸುತ್ತಿಗೆಯಿಂದ ಹೊಡೆದಿದ್ದಾನೆ. ಹಲ್ಲೆಗೊಳಗಾದ ಮಗಳ ಕೈಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತನಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಾನೆ. ಬರೀ ಹೆಣ್ಣು ಮಕ್ಕಳೇ ಹುಟ್ಟಿದ್ದಾರೆ ಎಂದು ಕುಡಿದು ಬಂದು ಹೆಂಡತಿ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.