ಖರ್ಕೋಡಾ,ಅ. 14 : ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಸೋನಿಯಾ ಗಾಂಧಿ ವಿರುದ್ಧ ಆಡಿದ ಮಾತು ತೀವ್ರ ವಿವಾದಕ್ಕೆ ಕಾರಣ.
ಹರಿಯಾಣದಲ್ಲಿ ಅ. 21ರಂದು ವಿಧಾನಸಭೆ ಚುನಾವಣೆ ನಡೆಯಲಿರುವ ನಿಮಿತ್ತ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ಆದರೆ ಸೋನಿಯಾ ಗಾಂಧಿಯವರನ್ನು ಸತ್ತ ಇಲಿಗೆ ಹೋಲಿಸಿದ ಖಟ್ಟರ್ ಭಾಷಣ ವಿವಾದಕ್ಕೆ ಕಾರಣ. ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಬಳಿಕ ರಾಹುಲ್ ಗಾಂಧಿಯವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಗಾಂಧಿ ಕುಟುಂಬವನ್ನು ಹೊರತುಪಡಿಸಿ ಬೇರೆಯವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಹೇಳಿದ್ದರು.