ಚಿಕ್ಕಬಳ್ಳಾಪುರ : ಗೋಮಾತಾ ನಮ್ಮ ಮಾತ ಎನ್ನುವ ನಾಣ್ಣುಡಿಯಂತೆ ರಾಜ್ಯದಲ್ಲಿ ಶೀಘ್ರವೇ ಪಶು ಆಂಬ್ಯುಲೆನ್ಸ್ ಗಳನ್ನು ಜಾರಿಗೆ ತರುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ಹಜ್, ಮತ್ತು ವಕ್ಫ್ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು.
ಹಜ್ ಮತ್ತು ವಕ್ಫ್ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶಿಲನಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಪಶುಪಾಲನೆ ಇಂದು ಕೇವಲ ಒಂದು ಕಸುಬಾಗಿ ಉಳಿಯದೇ ಉದ್ಯಮವಾಗಿ ಬೆಳೆಯುತ್ತಿದೆ.
ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಕೊಡುಗೆ ಅಪಾರ. ರೋಗಗ್ರಸ್ಥ ಪ್ರಾಣಿ ಮತ್ತು ಪಕ್ಷಿಗಳ ಚಿಕಿತ್ಸೆ ಹಾಗೂ ರೋಗಗಳ ತಡೆಗಟ್ಟುವಿಕೆಗಾಗಿ ವ್ಯಾಪಕ ಲಸಿಕಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.