ನೆಲಮಂಗಲ, ಡಿ. 21: ಬೆಂಗಳೂರು ಗ್ರಾಮಾಂತರ ಎಸ್ ಪಿ ಯಾಗಿ ಸೇವೆ ಸಲ್ಲಿಸುತ್ತಿರುವ ಖಡಕ್ ಪೊಲೀಸ್ ಎಸ್ಪಿ ಎಂದೇ ಕ್ಯಾತಿ ಹೊಂದಿರುವ ರವಿ.ಡಿ.ಚನ್ನಣ್ಣನವರ್, ಇಂದು ಸಹೋದ್ಯೋಗಿಗಳೊಂದಿಗೆ ಕಬ್ಬಡಿ ಆಟವಾಡಿ ತಮ್ಮ ಒತ್ತಡವನ್ನು ಕಡಿಮೆಗೊಳಿಸಿಕೊಂಡಿದ್ದಾರೆ.
ಬೆಂಗಳೂರು ಸಮೀಪದ ಬ್ಯಾಡರಹಳ್ಳಿ ಪೊಲೀಸ್ ಮೈದಾನದಲ್ಲಿ, ವಾರ್ಷಿಕ ಪೊಲೀಸ್ ಕ್ರೀಡಾಕೂಟದಲ್ಲಿ ಕಬಡ್ಡಿ ಆಟ ಆಡಿ ದೇಶೀಯ ಕ್ರೀಡೆಗೆ ಒತ್ತು ನೀಡಿದ್ದಾರೆ. ಸಹೋದ್ಯೋಗಿಗಳ ಜೊತೆ ಆಟಕ್ಕೂ ಸೈ ಕಾನೂನು ಪಾಲನೆಗೂ ಸೈ ಎನ್ನುವಂತೇ ಎಸ್ಪಿ ರವಿ.ಡಿ. ಚನ್ನಣ್ಣನವರ್ ಅಧಿಕಾರಿಗಳ ಜೊತೆ ಅಂಗಳದಲ್ಲಿ ಕಾದಾಟ ನಡೆಸಿದ್ದಾರೆ. ಎಸ್ ಪಿ ಗೆ ನೆಲಮಂಗಲ ಉಪವಿಭಾಗದ ಪೊಲೀಸ್ ಸಿಬ್ಬಂದಿಗಳಿಗೆ ಸಾಥ್ ನೀಡಿದ್ದಾರೆ.
ಕಬ್ಬಡಿ ಆಟದ ಹಲವಾರು ತಂತ್ರಗಳನ್ನು ಬಳಸಿ ಆಟ ವಾಡುತ್ತಿರುವುದು ಕಂಡು ಬಂದಿತ್ತು, ಇನ್ನೂ ದೇಶಾದ್ಯಂತ ಪೌರತ್ವಕ್ಕೆ ವಿರೋದವಾಗುತ್ತಿದ್ದರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತ್ಯಂತ ಸಂಯಮದಿಂದ ಸಮಸ್ಯೆ ನಿಬಾಯಿಸುತ್ತಿರುವುದರಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ, ಇದರ ನಡುವೆಯೇ ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಎಲ್ಲರನ್ನು ಹುರಿದುಂಬಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.