ಮಾಜಿ ಸಿಎಂಗೆ ಸ್ಪೀಕರ್ ರಮೇಶ್ ಪತ್ರ!

ಮಾಜಿ ಸಿಎಂಗೆ ಸ್ಪೀಕರ್ ರಮೇಶ್ ಪತ್ರ!

ಬೆಂಗಳೂರು  ,ಮೇ. 31, ನ್ಯೂಸ್ ಎಕ್ಸ್ ಪ್ರೆಸ್ : ಸ್ಪೀಕರ್ ರಮೇಶ್ ಕುಮಾರ್ ಅವರು ಸಿಎಂ ಕುಮಾರಸ್ವಾಮಿ ಅಲ್ಲದೇ, ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ಯವೈಖರಿಗೂ ಅಸಾಮಾಧನ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಜವಾಬ್ದಾರಿ ಮರೆತಿದ್ದೀರಿ. ಅಲ್ಲದೆ ನೀವು ಕೆಲವೇ ಕೆಲವು ಹಿಂಬಾಲಕ ನಾಯಕರಾಗಿ ವರ್ತಿಸುತ್ತಿದ್ದೀರಿ. ಸಮ್ಮಿಶ್ರ ಸರ್ಕಾರಕ್ಕೆ ನಿಮ್ಮ ಸಹಕಾರ ಹಾಗೂ ನೆರವು ಅತ್ಯಗತ್ಯ ಇದೆ. ಇನ್ನಾದರೂ, ನೀವು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ಎಂದು ಸಿದ್ದರಾಮಯ್ಯಗೆ ಬರೆದಿರುವ ಪತ್ರದಲ್ಲಿ ಸ್ಪೀಕರ್ ರಮೇಶ್‍ಕುಮಾರ್ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.

ಪತ್ರದಲ್ಲಿ ಏನಿದೆ?

ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ತಾವು ಕಳೆದ ಒಂದು ವರ್ಷದಿಂದ ಜವಬ್ದಾರಿಯನ್ನು ನಿರ್ವಹಿಸುತ್ತಿದ್ದೀರಿ. ಯಾವುದೇ ಪೂರ್ವಗ್ರಹ ಪೀಡಿತರಾಗದೇ, ಪ್ರಾಮಾಣಿಕವಾಗಿ ನನ್ನ ಅನಿಸಿಕೆಯನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ. ನೀವು ಶಾಸಕಾಂಗ ಪಕ್ಷದ ನಾಯಕನಂತೆ ನಡೆದುಕೊಳ್ಳದೆ ಕೆಲವೇ ಕೆಲವು ತಮ್ಮ ಆಪ್ತ ಶಾಸಕರ ಪಾಲಿನ ನಾಯಕನಂತೆ ನಡೆದುಕೊಳ್ಳುತ್ತಿದ್ದೀರಿ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos