ಈಗಾಗಲೇ 11 ಶಾಸಕರ ರಾಜಿನಾಮೆ: ಸ್ಪೀಕರ್ ಸ್ಪಷ್ಟನೆ!

ಈಗಾಗಲೇ 11 ಶಾಸಕರ ರಾಜಿನಾಮೆ: ಸ್ಪೀಕರ್ ಸ್ಪಷ್ಟನೆ!

ಬೆಂಗಳೂರು, ಜು .6 : ಈಗಾಗಲೇ 11 ಜನ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆಂದು ಕಚೇರಿಯಿಂದ ಮಾಹಿತಿ ಬಂದಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟನೆ ಪಡಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರವರು, ನನಗೆ ಯಾವ ಪತ್ರವು ಬಂದಿಲ್ಲಾ ನನಗೆ ಇದು ವರೆಗು ಯಾರು ಕುಡ ಬೇಟಿ ಮಾಡಿಲ್ಲ, ನನಗೆ ಪತ್ರ ಕೂಡ ಬರೆದಿರಲಿಲ್ಲ, 11 ಶಾಸಕರು ರಾಜೀನಾಮೆ ನೀಡಿದ್ದಾರೆಂದು ನನ್ನ ಕಚೇರಿಯಿಂದ ಮಾಹಿತಿ ಬಂದಿದೆ. ರಾಜೀನಾಮೆ ಪತ್ರ ಸಲ್ಲಿಸಿದ ಶಾಸಕರಿಗೆ ಸ್ವೀಕೃತಿ ಪತ್ರ ನೀಡಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. . ಮಂಗಳವಾರ ಕಚೇರಿಗೆ ಬಂದು ರಾಜೀನಾಮೆ ಪತ್ರ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಸ್ವೀಕರ್ ರಮೇಶ್ ಕುಮಾರ್ ಅವರು ಕಚೇರಿಯಲ್ಲಿರದ ಕಾರಣ ಕಾಂಗ್ರೆಸ್ನ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಸೇರಿದಂತೆ ಮಹಾಲಕ್ಷೀ ಲೇಔಟ್ ಶಾಸಕ ಗೋಪಾಲಯ್ಯ, ಹುಣಸೂರು ಶಾಸಕ ವಿಶ್ವನಾಥ್ ಮತ್ತು ಕೆ.ಆರ್ ಪೇಟೆ ಶಾಸಕ ನಾರಾಯಣ ಗೌಡ ಅವರು ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ ರಾಜಭವನದತ್ತ ಹೊರಟರು, ಇನ್ನುಳಿದ ನಾಲ್ಕು ಅತೃಪ್ತ ಶಾಸಕರ ಮನವೊಲಿಸಲು ಸಚಿವ ಡಿ.ಕೆ.ಶಿವಕುಮಾರ್ ಯತ್ನಿಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos