ಶಿವಮೊಗ್ಗ, ಅ. 25: ಅಕ್ರಮ ಹಣ ವರ್ಗಾವಣೆಯ ಆರೋಪದ ಮೇಲೆ ಒಂದು ತಿಂಗಳಿಗೂ ಅಧಿಕ ಕಾಲ ಜಾರಿ ನಿರ್ದೇಶನಾಲಯ ಬಂಧನದ ಬಳಿಕ ತಿಹಾರ್ ಜೈಲುವಾಸದಲ್ಲಿದ್ದ ಡಿಕೆಶಿ ಜೈಲಿನಿಂದ ಹೊರ ಬಂದಿದ್ದು, ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್ ನ ಗಣಪತಿ ದೇವಸ್ಥಾನದಲ್ಲಿ ಜಿಲ್ಲಾಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಡಿ.ಕೆ.ಶಿ ಅವರಿಗೆ ಆರೋಗ್ಯ, ಆಯುಷ್ಯ ಪ್ರಾಪ್ತಿಗೆ ಅಭಿಮಾನಿಗಳು ಪ್ರಾರ್ಥಿಸಿ, ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ತಮ್ಮ ನೆಚ್ಚಿನ ನಾಯಕನಿಗೆ ಅಭಿಮಾನಿಗಳು ಜೈಕಾರ ಹಾಕಿ ಸಂಭ್ರಮಿಸಿದರು.