ಶ್ರೀ ನಗರದಲ್ಲಿ ವ್ಯಕ್ತಿಯೊಬ್ಬ ಬಲಿ

ಶ್ರೀ ನಗರದಲ್ಲಿ ವ್ಯಕ್ತಿಯೊಬ್ಬ ಬಲಿ

ಶ್ರೀ ನಗರ , ಆ.7 : ಮುಂಜಾಗ್ರತಾ ಕ್ರಮವಾಗಿ ಜಮ್ಮು-ಕಾಶ್ಮೀರದಲ್ಲಿ ಪ್ರಮುಖ ರಾಜಕೀಯ ಮುಖಂಡರನ್ನು ಬಂಧಿಸಲಾಗಿದೆ. ಕೆಲವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಶ್ರೀನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಪ್ರತಿಭಟಿಸುತ್ತಿದ್ದ ಯುವಕನೊಬ್ಬನ ಬೆನ್ನಟ್ಟಿ ಹೋದಾಗ ಆತ ಝೇಲಂ ನದಿಗೆ ಹಾರಿದ್ದು, ಬಳಿಕ ಆತ ಸಾವನ್ನಪ್ಪಿರುವುದಾಗಿ ಹೆಸರು ಹೇಳಲು ಇಚ್ಛಿಸದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ಮತ್ತು 35ಎ ಕಲಂ ಅನ್ನು ರದ್ದುಗೊಳಿಸಿದ ಬಳಿಕ ತಣ್ಣಗಿದ್ದ ಜಮ್ಮುಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಶ್ರೀನಗರದಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಈ ವೇಳೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ಬುಧವಾರ ನಡೆದಿದೆ.

ಫ್ರೆಶ್ ನ್ಯೂಸ್

Latest Posts

Featured Videos