ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ

ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ

ತುಮಕೂರು, ಏ. 4, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು.

ತೇಜಸ್ವಿ ಸೂರ್ಯಗೆ ಮಾಜಿ ಸಚಿವ ವಿ.ಸೋಮಣ್ಣ ಸಾಥ್ ನೀಡಿದ್ದು, ಸಿದ್ದಗಂಗಾ ಮಠದಲ್ಲಿ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ನಾಯಕರು ಶಾಲು ಹೊದಿಸಿ ನಮಸ್ಕರಿಸಿದರು. ಆ ನಂತರ ಶ್ರೀಗಳು ತೇಜಸ್ವಿ ಸೂರ್ಯಗೆ ಶಾಲು ಹೊದಿಸಿ, ಆಶೀರ್ವಾದ ಮಾಡಿದರು. ಈ ವೇಳೆ ವಿ.ಸೋಮಣ್ಣ ಅವರು ಮಾತನಾಡಿ, ಮಠಕ್ಕೆ ಬಿಜೆಪಿಯವರು ಯಾರೆಲ್ಲಾ ಬಂದಿದ್ದಾರೆ, ಅವರೆಲ್ಲರಿಗೂ ಮಠದ ಜೊತೆ ಅವಿನಭಾವ ಸಂಬಂಧವಿದೆ ಎಂದು ತಿಳಿಸಿ ಶ್ರೀಗಳಿಗೆ ನಮಸ್ಕರಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos