“ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡೊಲ್ಲ” ಶ್ರೀಮಂತ ಪಾಟೀಲ್

“ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡೊಲ್ಲ” ಶ್ರೀಮಂತ ಪಾಟೀಲ್

ಬೆಂಗಳೂರು, ಏ. 25, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡೆಯಿಂದ ಮೈತ್ರಿ ಸರ್ಕಾರಕ್ಕೆ ಪೆಟ್ಟು ಬೀಳುವ ಸಾಧ್ಯತೆ ಇದ್ದು, ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್- ಜೆಡಿಎಸ್ ಸರ್ಕಸ್ ನಡೆಸಿದೆ. ಈ ಕಾರಣಕ್ಕೆ ರಮೇಶ್ ಜಾರಕಿಹೊಳಿ ಪರ ಇರುವ ಶಾಸಕರನ್ನ ಸೆಳೆಯಲು ಮೈತ್ರಿ ಸರ್ಕಾರದ ನಾಯಕರು ನಿರ್ಧರಿಸಿದ್ದು, ಈಗಾಗಲೇ ಶ್ರೀಮಂತ್‌ಪಾಟೀಲ್ ಜೊತೆ ಸಚಿವ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಮಾತನಾಡಿದ ಶ್ರೀಮಂತ್ ಪಾಟೀಲ್, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ. ಅವರ ರಾಜೀನಾಮೆಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ, ಕಾಂಗ್ರೆಸ್ ನಾಯಕರಾದ ಸಚಿವ ಡಿಕೆಶಿ ಮತ್ತು ಡಿಸಿಎಂ ಪರಮೇಶ್ವರ್, ಸಿಎಂ ಕುಮಾರಸ್ವಾಮಿ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ಸರ್ಕಾರದ ಮೇಲೆ ಆಗುವ ಪರಿಣಾಮದ ಬಗ್ಗೆ, ರಮೇಶ್ ಜಾರಕಿಹೊಳಿ ಜೊತೆಗಿರುವ ಶಾಸಕರ ನಡೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos