ಚಾಮರಾಜನಗರ, ಸೆ. 25: ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು, ಖಾಸಗಿ ಕ್ಲಿನಿಕ್ ನಡೆಸುವ ಸರ್ಕಾರಿ ವೈದ್ಯರಿಗೆ ಬಿಗ್ ಶಾಕ್ ನೀಡಿದ್ದು, ಖಾಸಗಿ ಕ್ಲಿನಿಕ್ ನಡೆಸುವ ವೈದ್ಯರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಇಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಜಿಲ್ಲಾಸ್ಪತ್ರೆಯಲ್ಲಿ ಇರುವ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿದ್ದಾರೆ. ವೇಳೆ ಮಾತನಾಡಿದ ಅವರು, ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ನಡೆಸುತ್ತಿದ್ದಾರೆ. ಇದು ನಿಜಕ್ಕೂ ದೊಡ್ಡ ದಂಧೆಯಾಗಿದೆ. ಇಂಥ ಸರ್ಕಾರಿ ವೈದ್ಯರ ಅವಶ್ಯಕತೆ ನಮಗಿಲ್ಲ. ಬೇಕಿದ್ದರೆ ಅಂಥವರು ಕಡ್ಡಾಯ ನಿವೃತ್ತಿ ತೆಗೆದುಕೊಳ್ಳಲಿ, ಖಾಸಗಿ ಕ್ಲಿನಿಕ್ ನಡೆಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.