ಮಂಗಳೂರು, ಏ. 30, ನ್ಯೂಸ್ ಎಕ್ಸ್ ಪ್ರೆಸ್: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಹೈಸ್ಕೂಲ್ ವಿದ್ಯಾರ್ಥಿನಿ ಸಿಂಚನಾಲಕ್ಷ್ಮಿ ಎಸ್ಎಸ್ಎಲ್ಸಿಯಲ್ಲಿ 625ಗೆ 624 ಅಂಕ ಪಡೆದು ಸೆಕೆಂಡ್ ಟಾಪರ್ ಗಳಲ್ಲಿ ಒಬ್ಬಳಾಗಿದ್ದಾಳೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಸಿಂಚನಾ ಲಕ್ಷ್ಮಿ ತಂದೆ ಮುರಳೀಧರಭಟ್, ಯಾವುದೇ ವಿದ್ಯಾರ್ಥಿ ಕಡಿಮೆ ಅಂಕ ಗಳಿಸಿದ್ದರೆ ಬೇಸರಪಟ್ಟುಕೊಳ್ಳಬಾರದು. ಸತತ ಪ್ರಯತ್ನದಿಂದ ಗುರಿ ಮುಟ್ಟಬಹುದು ಎಂದು ಹೇಳಿದರು.