ಎಸ್ ಟಿ ಗೆ ಕುರುಬ ಜಾತಿಯನ್ನು ಸೇರಿಸಲು ಮುಂದಾದ ರಾಜ್ಯ ಸರ್ಕಾರ

ಎಸ್ ಟಿ ಗೆ ಕುರುಬ ಜಾತಿಯನ್ನು ಸೇರಿಸಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು, ಮೇ. 11, ನ್ಯೂಸ್ ಎಕ್ಸ್ ಪ್ರೆಸ್: ಕುರುಬ ಸಮುದಾಯವನ್ನು ಎಸ್ ಟಿ (ಪರಿಶಿಷ್ಟ ಪಂಗಡ)ಕ್ಕೆ ಸೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.

ಕುರುಬ ಸಮಾಜದ ಸಂಸ್ಕೃತಿ, ಆಚಾರ- ವಿಚಾರ, ಭಾಷೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ, ಭೌಗೋಳಿಕ ಅಂಶಗಳ ಕುರಿತಂತೆ ಕುಲಶಾಸ್ತ್ರೀಯ ಅಧ್ಯಯನವನ್ನು ರಾಜ್ಯದ ಜಿಲ್ಲೆಗಳಲ್ಲಿ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಪ್ರಸ್ತುತ ಕುರುಬ ಜನಾಂಗ ಹಿಂದುಳಿದ ವರ್ಗಗಳ (2ಎ) ಅಡಿಯಲ್ಲಿ ಬರುತ್ತಿದ್ದು, ಶೇ.15 ರಷ್ಟು ಮೀಸಲು ಲಭ್ಯವಾಗುತ್ತಿದೆ. ಎಸ್ ಟಿ ಗೆ ಸೇರಿಸುವುದರಿಂದ ಕುರುಬ ಜನಾಂಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗಲಿದೆ.

ಸಮಾಜ ಕಲ್ಯಾಣ ಇಲಾಖೆಯು ಹೀಗೊಂದು ಸೂಚನೆಯನ್ನು ಬುಡಕಟ್ಟು ಇಲಾಖೆಗೆ ನೀಡಿದ್ದು, ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸಬೇಕೆಂದು ಹಲವು ಸಂಘ-ಸಂಸ್ಥೆಗಳು, ಮಠಗಳು ಒತ್ತಾಯ ಮಾಡಿದ್ದರಿಂದ ಸರ್ಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ಹೇಳಿದೆ.

ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸುವ ಈ ಪ್ರಸ್ತಾವನೆಯ ಹಿಂದೆ ಕುರುಬ ಸಮುದಾಯದ ನಾಯಕ ಸಿದ್ದರಾಮಯ್ಯ ಅವರ ಪಾತ್ರ ಮುಖ್ಯವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos