ಶೋಭಾ ಕರಂದ್ಲಾಜೆ ಗೆ ಟಾಂಗ್‌ ಕೊಟ್ಟ ಎಸ್ ಟಿ ಸೋಮಶೇಖರ್

ಶೋಭಾ ಕರಂದ್ಲಾಜೆ ಗೆ ಟಾಂಗ್‌ ಕೊಟ್ಟ ಎಸ್ ಟಿ ಸೋಮಶೇಖರ್

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆ  ರಂಗೇರಿದ್ದು ರಾಜ್ಯದೆಲ್ಲೆಡೆ ನಾಮಪತ್ರ ಸಲ್ಲಿಕೆ ಮುಗಿದಿದ್ದು, ಅಭ್ಯರ್ಥಿಗಳು ಮತಯಾಚನೆ ನಡೆಸುತ್ತಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಅವರು ಸ್ಪರ್ಧಿಸುತ್ತಿದ್ದಾರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜೀವ್ ಗೌಡ ಅವರು ಸ್ಪರ್ಧಿಸುತ್ತಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾದ ಬಳಿಕ ಮಾತಾಡಿದ ಅವರು, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರು ತನ್ನನ್ನು ಸಂಪೂರ್ಣವಾಗಿ ಕಡೆಗಣಿಸಿ ಸಭೆಗಳನ್ನು ನಡೆಸುತ್ತಿದ್ದಾರೆ ಮತ್ತು ಪ್ರಚಾರಕ್ಕೆ ಕರೆಯುತ್ತಿಲ್ಲ, ತನಗಾಗುತ್ತಿರುವ ಅವಮಾನವನ್ನು ಕ್ಷೇತ್ರದ ಮತದಾರರಿಗೆ ತಿಳಿಸಿದ್ದೇನೆ, ಅವರು ಹೇಳಿದ ಹಾಗೆ ನಡೆದುಕೊಳ್ಳುತ್ತೇನೆ ಯಾಕೆಂದರೆ ತನಗೆ ಅವರೇ ಹೈಕಮಾಂಡ್ ಇದ್ದಂತೆ ಎಂದು ಸೋಮಶೇಖರ್ ಹೇಳಿದರು.

ಶೋಭಾ ಅವರನ್ನು ಉಡುಪಿ-ಚಿಕ್ಕಮಗಳೂರಿನ ಜನತೆಯೇ ಗೋಬ್ಯಾಕ್ ಅಂತ ಹೇಳಿದ ಮೇಲೆ ಬೆಂಗಳೂರು ಉತ್ತರ ಕ್ಷೇತ್ರದ ಜನ ಯಾಕೆ ಅವರನ್ನು ಸ್ವಾಗತಿಸಿಯಾರು? ಎಂದು ಸೋಮಶೇಖರ್ ಪ್ರಶ್ನಿಸಿದರು. ಕ್ಷೇತ್ರದ ಹಿಂದಿನ ಸಂಸದರಾದ ಡಿಬಿ ಚಂದ್ರೇಗೌಡ ಮತ್ತು ಡಿವಿ ಸದಾನಂದ ಗೌಡ ಅವರ ಹಾಗೆ ಶೋಭಾ ಡಿಗ್ನಿಫೈಡ್ ಆಗಿ ನಡೆದುಕೊಳ್ಳದೆ ಕಾರ್ಯಕರ್ತರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಸೋಮಶೇಖರ್ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos