ಅನಂತಪುರ, ನ. 29 : ಆಂಧ್ರದ ಸರಕಾರಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಬೆಂಚ್ಗೆ ಸಿಬ್ಬಂದಿ ಕಟ್ಟಿಹಾಕಿದ ಘಟನೆ ನಡೆದಿದೆ. ಮೂರನೇ ತರಗತಿಯ ಒಬ್ಬ ವಿದ್ಯಾರ್ಥಿ ಹಾಗೂ ಐದನೇ ತರಗತಿಯ ಒಬ್ಬ ವಿದ್ಯಾರ್ಥಿಯ ಕೈ ಹಾಗೂ ಕಾಲುಗಳನ್ನು ಬೆಂಚ್ಗೆ ಕಟ್ಟಿಹಾಕಲಾಗಿದೆ.
ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಮಕ್ಕಳ ಹಕ್ಕು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಅನಂತಪುರ ಜಿಲ್ಲೆಯ ಕದಿರಿ ನಗರದ ಶಾಲೆಯ ಶಿಕ್ಷಕರು ಈ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಹಿನ್ನೆಲೆ ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ಇಲಾಖಾವಾರು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದೂ ಮಕ್ಕಳ ಹಕ್ಕು ಕಾರ್ಯಕರ್ತ ಅಚ್ಯುತ ರಾವ್ ಹೇಳಿದ್ದಾರೆ.