ಬೆಂಗಳೂರು, ಅ. 21 : ಅರಬ್ಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅ. 24ರವರೆಗೆ ಭರ್ಜರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಮುಂದಿನ ಬುಧವಾರದವರೆಗೆ ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದೆ. ಗುರುವಾರದಂದು ಹಳದಿ ಅಲರ್ಟ್ ಜಾರಿ ಮಾಡಲಾಗಿದೆ. ಹಿಂಗಾರು ಮಾರುತಗಳು ಚುರುಕಾಗಿರುವುದರಿಂದ ಅ.23 ರವರೆಗೆ ಬೆಂಗಳೂರು ನಗರದಲ್ಲಿ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.