ಹೈದರಾಬಾದ್, ನ. 23 : ಯುವಕನೊಬ್ಬ ತನ್ನ ಪ್ರೇಯಸಿ ಜೊತೆ ಮಜಾ ಮಾಡಲು ಮನೆಯಲ್ಲಿದ್ದ ತಾಯಿಯ ಚಿನ್ನಾಭರಣವನ್ನೇ ಕದ್ದ ಘಟನೆ ಆಂಧ್ರ ಪ್ರದೇಶದ ಹೈದರಾಬಾದ್ನಲ್ಲಿ ನಡೆದಿದೆ.
ಅರುಣ್ ಕುಮಾರ್ ಚಿನ್ನ ಕದ್ದ ಆರೋಪಿ. ಅರುಣ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ತನ್ನ ಪ್ರೀತಿಗಾಗಿ ಅವನು ಮನೆಯಲ್ಲಿ ಕದಿಯಲು ಶುರು ಮಾಡಿದ್ದನು. ಅಲ್ಲದೆ ಮನೆಯಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದು ಹಣವನ್ನು ಕದಿಯುತ್ತಿದ್ದನು. ಮನೆಯಲ್ಲಿ ಕಳ್ಳತನ ಆಗುವುದನ್ನು ನೋಡಿ ಯುವಕನ ತಾಯಿ ಈ ಬಗ್ಗೆ ಸಂಜೀವ್ ರೆಡ್ಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.