ಲೋಕಾಯುಕ್ತ ಬಲಗೊಳಿಸಿ ಹೋರಾಟ

ಲೋಕಾಯುಕ್ತ ಬಲಗೊಳಿಸಿ ಹೋರಾಟ

ಕುಣಿಗಲ್: ರಾಜ್ಯದಲ್ಲಿ ಲೋಕಾಯುಕ್ತ ಬಲಗೊಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಹಂತಹಂತವಾಗಿ ಹೋರಾಟ ರೂಪಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ರಾಜ್ಯಾಧ್ಯಕ್ಷ ಎಚ್ ಡಿ ರಮೇಶ್ ತಿಳಿಸಿದ್ದಾರೆ.
ಕುಣಿಗಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಪದಾಧಿಕಾರಿಗಳಿಗೆ ಪ್ರಮಾಣಪತ್ರ ನೀಡಿ ಮಾತನಾಡಿದರು ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸಬೇಕಾದರೆ ಹಾಗೂ ಸರ್ಕಾರದ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕಾದರೆ ಭ್ರಷ್ಟ ಅಧಿಕಾರಿಗಳು ಇರಬಾರದು ಅಂತಹ ಉತ್ತಮ ಸಂಸ್ಥೆಯನ್ನು ಜಾರಿಗೆ ತರಲು ಒತ್ತಾಯಿಸಿ ಲೋಕಾಯುಕ್ತ ಬಲಗೊಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಹೋರಾಟ ರೂಪಿಸುತ್ತೇವೆ ಎಂದರು.
ಜಿಲ್ಲಾ ಅಧ್ಯಕ್ಷರಾದ ಕೆ ಆರ್ ಮಂಜುನಾಥ್ ಬಿಎಚ್ ರಾಜು ಬೇಗೂರು ಮೂರ್ತಿ ಸರ್ದಾರ್ ಖಾನ್ ಶ್ರೀನಿವಾಸಮೂರ್ತಿ ಗಂಗಮ್ಮ ಲೋಕೇಶ್ ಸೇರಿದಂತೆ ಇತರರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos