ಪರೀಕ್ಷೆಯ ಸಂದರ್ಭದಲ್ಲಿ ಬಸ್ಸ್‌ ಗಳು ಇಲ್ಲದೇ ವಿದ್ಯಾರ್ಥಿಗಳು ಪರದಾಟ!

ಪರೀಕ್ಷೆಯ ಸಂದರ್ಭದಲ್ಲಿ ಬಸ್ಸ್‌ ಗಳು ಇಲ್ಲದೇ ವಿದ್ಯಾರ್ಥಿಗಳು ಪರದಾಟ!

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಬಹಳ ಅದ್ದೂರಿಯಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಒಂದಾದ ಯೋಜನೆ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಲಾಗಿತ್ತು.

ಇದರಿಂದ ಶಕ್ತಿ ಯೋಜನೆ ಜಾರಿಯಾದ ಗಳಿಂದಲೂ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಪರದಾಟ ಸ್ಥಿತಿ ನಿರ್ಮಾಣವಾಗಿದೆ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನಲೆಯಲ್ಲಿ ಸರ್ಕಾರಿ ಬಸ್ ಗಳು ಫುಲ್ ರಶ್ ಆಗಿ ಬರುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಗಳನ್ನು ನಿಲ್ಲಿಸದೆ ಸಾಗುತ್ತಿದ್ದಾರೆ.

ಇದರಿಂದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ ಕಾಲೇಜು ಪರೀಕ್ಷಾ ಕೇಂದ್ರಗಳಿಗೆ ತೆರಳಾಗದೆ ಸಮಸ್ಯೆ ಎದುರಿಸುವಂತೆ ಆಗಿದೆ. ಬಸ್ ಅವತಾರದಿಂದ ಬೇಸತ್ತು ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಹಾಸನ ಬೇಲೂರು ಭಾಗದಿಂದ ಚಿಕ್ಕಮಂಗಳೂರಿಗೆ ತಿರುಳಬೇಕಿರುವ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಬಸ್ ಗಳಿಲ್ಲದೆ ಸಂಕಷ್ಟಕೀಡಾಗಿದ್ದಾರೆ ಪರೀಕ್ಷೆ ಸಂದರ್ಭದಲ್ಲಿಯೂ ಈ ರೀತಿ ಸಮಸ್ಯೆಯಾಗುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ.

ಇದು ಪರೀಕ್ಷೆ ನಿಗದಿಯಾಗಿದೆ ನಾಲ್ಕು ದಿನಗಳ ಹಿಂದೆಯೇ ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಮನವಿ ಮಾಡಿದ್ದೆವು ಅದಾಗ್ಲೂ ಸಂಬಂಧ ಪಟ್ಟ ಅಧಿಕಾರಿಗಳು ಬಸ್ ಬಿಟ್ಟಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಬಸ್ ಗಳಿಲ್ಲದೆ ಪರದಾಟ ವಿದ್ಯಾರ್ಥಿಗಳು ನೇರವಾಗಿ ಬೇಲೂರು ಬಸ್ ನಿಲ್ದಾಣಕ್ಕೆ ಆಗಮಿಸಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಸಾರಿಗೆ ಇಲಾಖೆ ಮತ್ತು ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos