ಪತ್ರಕರ್ತರ ಸಂಘಕ್ಕೆ ವಿಶೇಷ ಕಟ್ಟಡದ ಸೌಲಭ್ಯ

ಪತ್ರಕರ್ತರ ಸಂಘಕ್ಕೆ ವಿಶೇಷ ಕಟ್ಟಡದ ಸೌಲಭ್ಯ

ಮೈಸೂರು: ಒಂದು ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದು, ಇಲ್ಲವೇ ಸರ್ಕಾರವನ್ನು ಉರುಳುವಂತೆ ಮಾಡುವ ತಾಕತ್ತು ಪತ್ರಿಕೋದ್ಯಮದಲ್ಲಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡದಲ್ಲಿ ನೂತನವಾಗಿ ನಿರ್ಮಾಣವಾದ ವ್ಯಾಯಾಮ ಶಾಲೆಯನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತರ ಸಂಘಕ್ಕೆ ವಿಶೇಷ ಕಟ್ಟಡ ಹಾಗೂ ಸೌಲಭ್ಯ ಒದಗಿಸಲು ಯಾವ ರೀತಿ ಕ್ರಮ ಕೈಗೊಳ್ಳಬಹುದು? ಮುಂದಿನ ದಿನಗಳಲ್ಲಿ ಎಲ್ಲಿ ಜಾಗ ಸಿಗಬಹುದು ಎಂಬ ನಿಟ್ಟಿನಲ್ಲಿ ಮುಡಾ ಜೊತೆ ಚರ್ಚೆ ಮಾಡಿ ತೀರ್ಮಾನ ಪ್ರಕಟಿಸಲಿದ್ದೇನೆ ಮೈಸೂರಿನಲ್ಲಿ ಪತ್ರಕರ್ತರು ಗೃಹನಿರ್ಮಾಣ ಸಂಘದಿಂದ ಅರ್ಜಿ ಹಾಕಿದರೆ ರಿಯಾಯ್ತಿ ದರದಲ್ಲಿ ನಿವೇಶನ ಕೊಡಿಸುವ ಬಗ್ಗೆಯೂ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕಷ್ಟ ಕಾಲದಲ್ಲಿ ಮೈಸೂರಿನ ಜನತೆಗೆ ಆಹಾರ ಕಿಟ್ ನೀಡಿದ ಸುತ್ತೂರು ಶ್ರೀಗಳ ಕಾರ್ಯ ಅಪಾರ. ಅವರು ತಮ್ಮ ಶ್ರೀಮಠದಿಂದ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು ಎಂದು ತಿಳಿಸಿದರು.

ಪತ್ರಿಕಾರಂಗದಲ್ಲಿ ಗಣನೀಯ ಕೆಲಸ ಮಾಡಿದವರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಸಂಸದರಾದ ಪ್ರತಾಪ್ ಸಿಂಹ ಅವರು ಬದ್ಧತೆಯುಳ್ಳ ರಾಜಕಾರಣಿ. ಅವರು ಸಹ ಪತ್ರಕರ್ತರ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಪತ್ರಿಕೆಗಳಲ್ಲಿ ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಯಾವುದೇ ವರದಿಗಳು ಬಂದರೂ ಅದಕ್ಕೆ ಸ್ಪಂದಿಸುವ ಕೆಲಸವನ್ನು ಇಲಾಖೆ ಮಾಡಲಿದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos