ಬೆಂಗಳೂರು: ಶಾಲೆಯಲ್ಲಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನೀಡದ್ದಕ್ಕೆ ಮನನೊಂದ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಎಸೆಸ್ಸೆಲ್ಸಿ ವಿದ್ಯಾರ್ಥಿಯನ್ನು ನಾಗವಾರ ಪಾಳ್ಯ ನಿವಾಸಿ ಜನಾರ್ದನ್ (15) ಎಂದು ಗುರುತಿಸಲಾಗಿದೆ.
ಶಾಲೆಯಲ್ಲಿ ಜನಾರ್ದನ್ ನ ಹಾಜರಾತಿ ಕಡಿಮೆ ಇದ್ದ ಹಿನ್ನೆಲೆಯಲ್ಲಿ ಪರೀಕ್ಷಾ ಹಾಲ್ ಟಿಕೆಟ್ ನೀಡಲು ಶಾಲಾ ಸಿಬ್ಬಂದಿ ನಿರಾಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಜನಾರ್ದನ್ ತನ್ನ ಮನೆಯಲ್ಲಿ ನಿನ್ನೆ ವಿಷ ಸೇವನೆ ಮಾಡಿದ್ದ. ಬಳಿಕ ಅಸ್ವಸ್ಥಗೊಂಡಿದ್ದ ಆತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.