ಬೆಂಗಳೂರು, ಏ. 30, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗಂಗವಾರ ಗ್ರಾಮದಲ್ಲಿ ಫಲಿತಾಂಶ ಬರುವ ಮುನ್ನವೇ ಅನುತ್ತೀರ್ಣನಾಗುವೆನೆಂಬ ಭೀತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಡಿಸ್ಟಿಂಕ್ಷನ್ನಲ್ಲಿ ಪಾಸಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ನಂದನ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಓದುವುದರಲ್ಲಿ ಮುಂದಿದ್ದ ಈತ ಗಂಗವಾರದ ಸನ್ರೈಸ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಈತ ಎಸ್ಎಸ್ಎಲ್ಸಿಯಲ್ಲಿ 625ಕ್ಕೆ 530 ಅಂಕ ಪಡೆದು ಉತ್ತೀರ್ಣನಾಗಿದ್ದು, ತನ್ನ ದುಡುಕಿನ ನಿರ್ಧಾರದಿಂದ ಈ ವಿಚಾರ ತಿಳಿಯಲು ಈತನೇ ಇಲ್ಲವಾಗಿದ್ದಾನೆ. ಸ್ಥಳಕ್ಕೆ ಚನ್ನರಾಯಪಟ್ಟಣ ಠಾಣೆ ಪಿಎಸ್ಐ ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.