ಸುದೀಪ್ ಗೆ ಅರೆಸ್ಟ್ ವಾರೆಂಟ್ ಜಾರಿ

ಸುದೀಪ್ ಗೆ ಅರೆಸ್ಟ್ ವಾರೆಂಟ್ ಜಾರಿ

ಬೆಂಗಳೂರು, ಮಾ. 27, ನ್ಯೂಸ್ ಎಕ್ಸ್ ಪ್ರೆಸ್: ಕಿಚ್ಚ ಕ್ರಿಯೇಷನ್ಸ್ ಅಡಿಯಲ್ಲಿ ಮೂಡಿ ಬರುತ್ತಿದ್ದ ವಾರಸ್ದಾರ ಧಾರಾವಾಹಿಯ ಶೂಟಿಂಗ್ ಗಾಗಿ ಬಳಸಿದ್ದ ಮನೆ ಬಾಡಿಗೆ ಕಟ್ಟದ ಹಿನ್ನಲೆಯಲ್ಲಿ ಕಿಚ್ಚ ಸುದೀಪ್ ಅವರ ಮೇಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ.

ಮಾ. 26ರಂದು ಕೋರ್ಟ್ ಗೆ ಹಾಜರಾಗದ ಕಾರಣ ಚಿಕ್ಕಮಗಳೂರಿನ ಜೆಎಂಎಫ್ ಸಿ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ದೀಪಕ್ ಮಯೂರ್ ಎಂಬುವವರು ಸುದೀಪ್ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಈ ಹಿಂದೆ ಖಾಸಗಿ ವಾಹಿನಿಯಲ್ಲಿ ಸುದೀಪ್ ನಿರ್ಮಾಣ ಸಂಸ್ಥೆ ಕಿಚ್ಚ ಕ್ರಿಯೇಷನ್ಸ್ ನಲ್ಲಿ ವಾರಸ್ದಾರ ಎಂಬ ಧಾರಾವಾಹಿ ಪ್ರಸಾರವಾಗುತ್ತಿತ್ತು. ಶೂಟಿಂಗ್ ಗಾಗಿ ದೀಪಕ್ ಮಯೂರ್ ಪಟೇಲ್ ಅವರ ಮನೆ ಹಾಗೂ ತೋಟವನ್ನು ಬಾಡಿಗೆ ಪಡೆದುಕೊಳ್ಳಲಾಗಿತ್ತು. ದೀಪಕ್ ಅವರ ಮನೆ ಹಾಗೂ ತೋಟವನ್ನು ಹಾನಿ ಮಾಡಿದ್ದಲ್ಲದೆ ಬಾಡಿಗೆ ನೀಡಿಲ್ಲ ಎಂದು ದೀಪಕ್, ಸುದೀಪ್ ವಿರುದ್ದ ದೂರು ದಾಖಲಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos