ಚಿಕ್ಕಬಳ್ಳಾಪುರ: ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರಿಗೆ ಭರ್ಜರಿ ಬೆಂಬಲ ಸಿಗುತ್ತಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಅವರು ಭರ್ಜರಿ ರೋಡ್ ಶೋ ನಡೆಸಿ, ತಮ್ಮ ಗೆಲುವಿಗಾಗಿ ರಣಕಹಳೆಯ ಮೊಳಗಿಸಿದ್ದಾರೆ.
‘ಡಾ.ಕೆ.ಸುಧಾಕರ್ ಉತ್ತಮ ವಾಗ್ಮಿ’ ನಾಮಪತ್ರ ಸಲ್ಲಿಕೆ ಬಳಿಕ ಅಭ್ಯರ್ಥಿ ಡಾ. ಕೆ. ಸುಧಾಕರ್ ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಹಿರಿಯ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಮೊದಲ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಿರುವುದು ವೈಯಕ್ತಿಕ ಹಿತಾಸಕ್ತಿಗಾಗಿ ಅಲ್ಲ. ನರೇಂದ್ರ ಮೋದಿಯಂತಹ ಸುಭದ್ರ ನಾಯಕನನ್ನು ನೀಡಲು ನಾವು ಶ್ರಮಿಸುತ್ತಿದ್ದೇವೆ. ಡಾ. ಕೆ. ಸುಧಾಕರ್ ಅವರನ್ನು ಆಶೀರ್ವದಿಸಲು ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಬಂದಿದ್ದಾರೆ. ಈಗ ಅವರನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.
ಎಲ್ಲರನ್ನೂ ಸಮಾನರಾಗಿ ಕಾಣುತ್ತೇನೆ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ಮಾತನಾಡಿ ಬಯಲು ಸೀಮೆಗೆ ಶಾಶ್ವತ ಕುಡಿವ ನೀರಿನ ಯೋಜನೆ ಬೇಕಿದೆ. ನಾವು & ಜೆಡಿಎಸ್ ಸೇರಿ ಖಂಡಿತ ಉತ್ತಮ ಯೋಜನೆ ನೀಡುತ್ತೇವೆ ಎಚ್ಎನ್ ವ್ಯಾಲಿ, ಕೆಸಿ ವ್ಯಾಲಿ ತೃತೀಯ ಹಂತದ ಯೋಜನೆಗೆ ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿದೆ. ಅದನ್ನು ಕಾಂಗ್ರೆಸ್ ಸರ್ಕಾರವು ಜಾರಿ ಮಾಡಿಲ್ಲ. ಕಾಂಗ್ರೆಸ್ ನಾಯಕರು ಯಾವುದೇ ಅಭಿವೃದ್ಧಿ ಮಾಡಿಲ್ಲ, ಆದ್ದರಿಂದ ಕೇವಲ ನಿಂದನೆ ಮೂಲಕ ಉತ್ತರ ಕೊಡುತ್ತಿದ್ದಾರೆ. ನಾನು, ಸಾಮಾನ್ಯ ರೈತನ ಮನೆಯಲ್ಲಿ ಹುಟ್ಟಿ ಬಂದಿದ್ದೇನೆ. ನಾನು ಸಾಮಾನ್ಯ ಮೇಷ್ಟ್ರ ಮಗ. ಈ ಸಮಾಜವನ್ನು ತಿದ್ದುವ ಶಿಕ್ಷಕನ ಮಗನಾಗಿ ಬೆಳೆದಿದ್ದೇನೆ ಎಂದರು.
ನಾನು, ಎಲ್ಲ ಮತದಾರರನ್ನ ಸಮಾನವಾಗಿ ಕಾಣುತ್ತೇನೆ. ಕಳೆದ 10 ತಿಂಗಳಲ್ಲಿ ನಾನು, ಅಜ್ಞಾತವಾಸ ಅನುಭವಿಸಿದ್ದೇನೆ. ನಾನೇನೂ ತಪ್ಪು ಮಾಡಿಲ್ಲ, ಜನರ ಸೇವೆಯನ್ನು ನಾನು ಮಗನಂತೆ ಮಾಡುತ್ತೇನೆ ಎಂದು ಹೇಳಿ ಭಾವುಕರಾದರು. ಈ ವೇಳೆ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಬೈರತಿ ಬಸವರಾಜು, ಶಾಸಕ ಧೀರಜ್ ಮುನಿರಾಜು, ಸಂಸದ ಮುನಿಸ್ವಾಮಿ ಮತ್ತಿತರ ಪ್ರಮುಖರು ಇದ್ದರು.