ಸಕ್ಕರೆ ನಾಡಲಿ ಕಮಲ

ಸಕ್ಕರೆ ನಾಡಲಿ ಕಮಲ

ಬೆಂಗಳೂರು, ಡಿ.10 : ಕೆ.ಆರ್.ಪೇಟೆ ವಿಧಾನಸಬಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಅವರು ಗೆಲುವು ಸಾಧಿಸಿದ್ದು, ಬಿಜೆಪಿ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಖಾತೆ ತೆರೆದಿದೆ.
ಮಂಡ್ಯ ಜಿಲ್ಲೆಯಲ್ಲಿ ಗೆಲುವು ಸಾಧಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಇತರ ಪಕ್ಷಗಳ ನಾಯಕರ ಹುಬ್ಬೇರುವಂತೆ ಮಾಡಿದೆ. ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರ ರಂತಂತ್ರ, ಶ್ರಮ ದೊಡ್ಡದು ಎಂದು ಹೇಳಲಾಗುತ್ತಿದೆ.
ವಿಜಯೇಂದ್ರ ಅವರ ನೇತೃತ್ವದಲ್ಲಿ ಪಕ್ಷದ ಉಸ್ತುವಾರಿಗಳ ತಂಡ ರಚಿಸಲಾಗಿತ್ತು. ಉಸ್ತುವಾರಿಯಾಗಿ ನೇಮಕಗೊಂಡ ನಂತರ ಸತತವಾಗಿ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡು ಪಕ್ಷದ ಸಂಘಟನೆ ವಿಸ್ತರಿಸಿದ್ದರು. ಹೀಗಾಗಿ ಈ ಗೆಲವು ವಿಜಯೇಂದ್ರ ಅವರ ರಾಜಕೀಯ ಭವಿಷ್ಯಕ್ಕೆ ದೊಡ್ಡ ಮೆಟ್ಟಿಲಾಗುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ಅಥವಾ ಸ್ಥಾನಮಾನವನ್ನು ತಂದುಕೊಡುವ ನಿರೀಕ್ಷೆಗಳೂ ಹುಟ್ಟಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos