ಕೋಲಾರ, ಮೇ. 6, ನ್ಯೂಸ್ ಎಕ್ಸ್ ಪ್ರೆಸ್: ಮುಳಬಾಗಿಲು ತಾಲೂಕಿನ ಕಾಂತರಾಜ ಸರ್ಕಲ್ ಬಳಿ ಇರುವ ವಿದ್ಯುತ್ ಕಂಬ ಏರಿದ ವ್ಯಕ್ತಿ ತನ್ನ ಕುಟುಂಬಕ್ಕೆ ಅನ್ಯಾಯ ಆಗಿದೆ. ಕುಟುಂಬಕ್ಕೆ ಆಗಿರುವ ಅನ್ಯಾಯದಿಂದ ಬೇಸತ್ತು ಕಂಬವೇರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.
ತಮಿಳುನಾಡು ಮೂಲದ ಅಪರಿಚಿತ ವ್ಯಕ್ತಿಯೊಬ್ಬ, ವಿದ್ಯುತ್ ಕಂಬವೇರಿ ನ್ಯಾಯಕ್ಕಾಗಿ ಆಗ್ರಹ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ.
ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಆತನ ಮನ ಒಲಿಸಿ ಕೆಳಗೆ ಇಳಿಸಲಾಗಿದ್ದು, ಮುಳಬಾಗಲು ಗ್ರಾಮಾಂತರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.