ಮನನೊಂದು ರಾಷ್ಟ್ರೀಯ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣು

ಮನನೊಂದು ರಾಷ್ಟ್ರೀಯ ಕಬಡ್ಡಿ ಆಟಗಾರ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಪ್ರೀತಿ ಮಾಡಿ ಮದುವೆಯಾಗುವುದು ಸರ್ವೇಸಾಮಾನ್ಯವಾಗಿದೆ. ಆದರೆ ಹುಡುಗ ಹುಡುಗಿಯ ಮನೆಯಲ್ಲಿ ಈ ಪ್ರೀತಿಗೆ ಒಪ್ಪದಿದ್ದರೆ ಓಡಿಹೋಗಿ ಮದುವೆಯಾಗುವುದು ಸಹ ಸಾಮಾನ್ಯವಾಗಿದೆ.

ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್ ಎಂಬಾತ ತನುಜ ಎಂಬ ಯುವತಿ ನಾಲ್ಕು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರದ್ದು ಒಂದೇ ಊರಾಗಿತ್ತು. ಆದರೆ ಇವರ ಪ್ರೀತಿಗೆ ಯುವತಿಯ ಮನೆಯವರ ಸಮ್ಮತಿ ಇಲ್ಲದ ಕಾರಣ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರು ಓಡಿಹೋಗಿ ಮದುವೆ ಯಾಗಿದ್ದರು.

ಮದುವೆಯಾಗಿ ಕೇವಲ ಮೂರೇ ದಿನ ಕಳೆದಿತ್ತು ಇನ್ನೇನು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ನವ ಜೋಡಿ ದಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಮಾಡುವ ಹೊತ್ತಲ್ಲೇ ಯುವತಿಯ ಮನೆಯವರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಈ ಸಂಬಂಧ ಈ ಜೋಡಿಯನ್ನು ಪೊಲೀಸ್ ಠಾಣೆಗೆ ಕರೆಸಿ ಪಂಚಾಯಿತಿ ನಡೆದಿತ್ತು.

ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾರೆ ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಯುವತಿ ಹೇಳಿಕೆ ಕೊಟ್ಟಿದ್ದಾಳೆ. ಇದರಿಂದ ಮನನೊಂದ ರಾಷ್ಟ್ರಮಟ್ಟದ ಕಬ್ಬಡಿ ಆಟಗಾರ ವಿನೋದ್(24) ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

 

ಫ್ರೆಶ್ ನ್ಯೂಸ್

Latest Posts

Featured Videos