ಬುದ್ದಿವಾದ ಹೇಳಿದಕ್ಕೆ ಯುವಕ ಆತ್ಮಹತ್ಯೆ

ಬುದ್ದಿವಾದ ಹೇಳಿದಕ್ಕೆ ಯುವಕ ಆತ್ಮಹತ್ಯೆ

ರಾಯಚೂರು: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಗೆ ನಾವು ಏನೇ ಹೇಳಿದರೂ ಸಹ ಅವರು ಅದನ್ನು ಅರಿಯುವ ಮನೋಭಾವ ಇರುವುದಿಲ್ಲ. ಅದರಿಂದ ಅವರು ಎಷ್ಟು ದುಡಿಕಿನ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದೇ ತರಹ ಇಲ್ಲೊಬ್ಬ ಯುವಕ  ತನ್ನ ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕುಡಿಯೋ ಬೇಡ ಎಂದು ತಂದೆ ಬುದ್ಧಿವಾದ ಹೇಳಿದ್ದಕ್ಕೆ ಮಗ ನೇಣು ಬಿಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ಆದರ್ಶ್ 24 ವರ್ಷದ ಯುವಕ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ.  ಕುಡಿದು ಹಣ ಹಾಳು ಮಾಡಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಮಗನನ್ನು ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲುಮಟ್ಟಿದೆ.

ಫ್ರೆಶ್ ನ್ಯೂಸ್

Latest Posts

Featured Videos